ಪ್ರಭಾವಿ ರಾಜಕಾರಣಿಗಳ ಸ್ನೇಹದ ಸೋಗಿನಲ್ಲಿ ಜನರಿಗೆ ಕಡಿಮೆ ಬೆಲೆಗೆ ಚಿನ್ನ ಕೊಡಿಸುವುದಾಗಿ ನಂಬಿಸಿ ಸುಮಾರು 20 ಕೋಟಿ ರು. ವಂಚಿಸಿದ ಆರೋಪದಡಿ ಮಹಿಳೆ ಸೇರಿದಂತೆ ಇಬ್ಬರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

10 Jul 2025
ರಾಜ್ಯ

ಬೆಂಗಳೂರು ಜುಲೈ.10:ಕೀರ್ಲೋಸ್ಕರ್‌ ಕಾಲೋನಿಯ ಗೃಹ ಲಕ್ಷ್ಮೀ ಲೇಔಟ್‌ ನಿವಾಸಿ ಸವಿತಾ ಹಾಗೂ ಸುಂಕದಕಟ್ಟೆಯ ಶ್ರೀನಿವಾಸ ನಗರದ ಪುನೀತ್ ಬಂಧಿತರಾಗಿದ್ದು, ಆರೋಪಿಗಳಿಂದ ಹಣ ಹಾಗೂ ಕೆಲ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.ಈ ವಂಚನೆ ಜಾಲದಲ್ಲಿ ತಪ್ಪಿಸಿಕೊಂಡಿರುವ ಸಂಗೀತ ನಿರ್ದೇಶಕ ಸೇರಿದಂತೆ ಕೆಲ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


ಬಸವೇಶ್ವರನಗರದ ಕುಸುಮಾ ಅವರಿಗೆ ಕಡಿಮೆ ಬೆಲೆಗೆ ಆಭರಣ ಹಾಗೂ ಖಾಸಗಿ ಮನರಂಜನಾ ವಾಹಿನಿಯಲ್ಲಿ ಟೆಂಡರ್ ಕೊಡಿಸುವುದಾಗಿ ನಂಬಿಸಿ 95 ಲಕ್ಷ ರು. ಪಡೆದು ಸವಿತಾ ಟೋಪಿ ಹಾಕಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಕಿಟ್ಟಿ ಪಾರ್ಟಿಗಳಲ್ಲಿ ಗಾಳ:


ತನ್ನ ಕುಟುಂಬದ ಜತೆ ಕೀರ್ಲೋಸ್ಕರ್ ಕಾಲೋನಿಯಲ್ಲಿ ಸವಿತಾ ನೆಲೆಸಿದ್ದಳು. ತನ್ನನ್ನು ಪ್ರಭಾವಿ ಮಹಿಳೆ ಎನ್ನುವಂತೆ ಆಕೆ ಬಿಂಬಿಸಿಕೊಂಡಿದ್ದಳು. ಅಲ್ಲದೆ ತನಗೆ ಪ್ರಭಾವಿ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಗಣ್ಯರ ಪರಿಚಯವಿದೆ ಎಂದು ಸಹ ಆಕೆ ಹೇಳಿಕೊಂಡಿದ್ದಳು. ಇದೇ ಸೋಗಿನಲ್ಲಿ ಶ್ರೀಮಂತರ ಕುಟುಂಬಗಳ ಸ್ನೇಹವನ್ನು ಸವಿತಾ ಮಾಡಿದ್ದಳು. ತನ್ನ ನಾಜೂಕಿನ ಮಾತುಗಳ ಮೂಲಕ ಜನರನ್ನು ಮರಳು ಮಾಡಿ ವಂಚನೆ ಖೆಡ್ಡಾಕ್ಕೆ ಕೆಡುವುತ್ತಿದ್ದಳು. ಹಾಗೆಯೇ ಮನೆಯಲ್ಲಿ ಕಿಟ್ಟಿ ಪಾರ್ಟಿಗಳನ್ನು ಆಯೋಜಿಸಿ ಸಿರಿವಂತ ಕುಟುಂಬದ ಮಹಿಳೆಯರನ್ನು ಆಹ್ವಾನಿಸಿದ್ದಳು. ಆಗ ಕಡಿಮೆ ಬೆಲೆ ಚಿನ್ನ ಕೊಡಿಸುವುದಾಗಿ ಹೇಳಿ ಹಣ ಪಡೆದು ಆಕೆ ನಾಮ ಹಾಕುತ್ತಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅದೇ ರೀತಿ ಬಸವೇಶ್ವರನಗರದ ಕುಸುಮಾ ಅವರಿಗೆ ಖಾಸಗಿ ವಾಹಿನಿಯಲ್ಲಿ ಟೆಂಡರ್ ಹಾಗೂ ಕಡಿಮೆಗೆ ಬೆಲೆ ಬಂಗಾರ ಕೊಡಿಸುವ ನೆಪದಲ್ಲಿ 90 ಲಕ್ಷ ರು ಪಡೆದು ಸವಿತಾ ವಂಚಿಸಿದ್ದಳು. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಅದೇ ರೀತಿ ಬಸವೇಶ್ವರನಗರದ ಕುಸುಮಾ ಅವರಿಗೆ ಖಾಸಗಿ ವಾಹಿನಿಯಲ್ಲಿ ಟೆಂಡರ್ ಹಾಗೂ ಕಡಿಮೆಗೆ ಬೆಲೆ ಬಂಗಾರ ಕೊಡಿಸುವ ನೆಪದಲ್ಲಿ 90 ಲಕ್ಷ ರು ಪಡೆದು ಸವಿತಾ ವಂಚಿಸಿದ್ದಳು. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


20 ಕೋಟಿ ರು. ವಂಚನೆ:


ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಚಿನ್ನ ಕೊಡಿಸುವ ನೆಪದಲ್ಲಿ ಜನರಿಗೆ ಸುಮಾರು 20 ಕೋಟಿ ರು.ಗಳಿಗೂ ಹೆಚ್ಚು ಹಣವನ್ನು ಸವಿತಾ ವಂಚಿಸಿರುವ ಬಗ್ಗೆ ತನಿಖೆಯಲ್ಲಿ ಪತ್ತೆಯಾಗಿದೆ. ಈಕೆಯಿಂದ ಮೋಸಕ್ಕೊಳಗಾದವರು ದೂರು ನೀಡಿದರೆ ಪರಿಶೀಲಿಸಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ಹಿಂದೆ ಗೋವಿಂದರಾಜನಗರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ಕೊಟ್ಟಿದ್ದರು. ಆಗ ಸವಿತಾಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿತ್ತು. ಆದರೆ ಅಷ್ಟರಲ್ಲಿ ರಾಜಿ ಸಂಧಾನ ಮೂಲಕ ವಿವಾದ ಪರಿಹರಿಸಿಕೊಳ್ಳುವುದಾಗಿ ಹೇಳಿ ಸಂತ್ರಸ್ತ ಮಹಿಳೆ ದೂರು ಹಿಂಪಡೆದರು ಎಂದು ಅಧಿಕಾರಿಗಳು ಹೇಳಿದ್ದಾರೆ.


ಸವಿತಾಳ ವ್ಯವಸ್ಥಿತ ವಂಚನೆ ಜಾಲ:


ತನ್ನ ವಂಚನೆಗೆ ವ್ಯವಸ್ಥಿತ ಸಂಘಟನೆಯನ್ನು ಸವಿತಾ ಕಟ್ಟಿದ್ದಳು. ಶ್ರೀಮಂತರ ಮಹಿಳೆಯರನ್ನು ಗಾಳ ಹಾಕಲು ಆಕೆಗೆ ಓರ್ವ ಚಲನಚಿತ್ರ ನಿರ್ದೇಶಕ ಸಹ ಸಾಥ್ ಕೊಟ್ಟಿದ್ದಾನೆ. ಇನ್ನು ಬಂಧಿತ ಆರೋಪಿ ಪುನೀತ್‌ ಹಣ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ಹೇಳಿವೆ.


ಸಿಎಂ, ಡಿಸಿಎಂ ಜತೆ ಫೋಟೋಗಳು:


ತನಗೆ ಪ್ರಭಾವಿ ರಾಜಕಾರಣಿಗಳ ಪರಿಚಯವಿದೆ ಎಂದು ಬಿಂಬಿಸಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳು, ಸಂಸದರು ಹಾಗೂ ಶಾಸಕರ ಜತೆ ತೆಗೆಸಿಕೊಂಡಿದ್ದ ಪೋಟೋಗಳನ್ನು ಸವಿತಾ ತೋರಿಸುತ್ತಿದ್ದಳು. ಕೆಲ ಸಿನಿಮಾ ನಟ-ನಟಿಯರ ಜತೆ ಸಹ ಆಕೆಯ ಪೋಟೋಗಳಿವೆ ಎಂದು ತಿಳಿದು ಬಂದಿದೆ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ