ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಬುರಡೆಯನ್ನು ನೇತ್ರಾವತಿ ಸ್ನಾನಘಟ್ಟ ಸಮೀಪದ ಅರಣ್ಯದ ಬಂಗ್ಲೆಗುಡ್ಡದಿಂದ ತಾನೇ ತೆಗೆದುಕೊಂಡು ಹೋಗಿ ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ಗೆ ಕೊಟ್ಟಿದ್ದೆ ಎಂದು ಸೌಜನ್ಯ ಮಾವ ವಿಠಲಗೌ

07 Sep 2025
ಕರಾವಳಿ

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ದೂರುದಾರ ಚಿನ್ನಯ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಬುರಡೆಯನ್ನು ನೇತ್ರಾವತಿ ಸ್ನಾನಘಟ್ಟ ಸಮೀಪದ ಅರಣ್ಯದ ಬಂಗ್ಲೆಗುಡ್ಡದಿಂದ ತಾನೇ ತೆಗೆದುಕೊಂಡು ಹೋಗಿ ಹೋರಾಟಗಾರ ಗಿರೀಶ್‌ ಮಟ್ಟಣ್ಣವರ್‌ಗೆ ಕೊಟ್ಟಿದ್ದೆ ಎಂದು ಸೌಜನ್ಯ ಮಾವ ವಿಠಲಗೌಡ ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.



ಶನಿವಾರ ಸಂಜೆ ನೇತ್ರಾವತಿ ಸ್ನಾನಘಟ್ಟದ ಸಮೀಪದ ಅರಣ್ಯಕ್ಕೆ ವಿಠಲ ಗೌಡ ಹಾಗೂ ಹೋರಾಟಗಾರ ಜಯಂತ್‌ ಅವರೊಂದಿಗೆ ಬಂದ‌ ಎಸ್‌ಐಟಿ, ತಲೆಬುರುಡೆ ಸ್ಥಳದ ಮಹಜರು ನಡೆಸಿತು. ಈ ವೇಳೆ ಬಂಗ್ಲೆಗುಡ್ಡಕ್ಕೆ ವಿಠಲ ಗೌಡನನ್ನು ಎಸ್‌ಐಟಿ ತಂಡ ಕರೆದೊಯ್ದಿದೆ. ಗಿರೀಶ್ ಮಟ್ಟಣ್ಣವರ್‌ಗೆ ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತೆಗೆದುಕೊಟ್ಟಿದ್ದೆ. ಬಂಗ್ಲೆಗುಡ್ಡೆ ಕಾಡಿನ ಮಣ್ಣಿನ ಮೇಲ್ಭಾಗದಿಂದ ಬುರುಡೆ ತೆಗೆದಿದ್ದೆ ಎಂದು ವಿಠಲಗೌಡನೇ ತನಿಖಾ ತಂಡದ ಎದುರು ಬಾಯಿ ಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.


ವಿಠಲ ಗೌಡನ ಪ್ರಮುಖ ಪಾತ್ರ:


ಬುರುಡೆ ಟೀಂಗೆ ಚಿನ್ನಯ್ಯನ ಪರಿಚಯಿಸಿದ್ದೇ ಸೌಜನ್ಯ ಮಾವ ವಿಠಲಗೌಡ. ಚಿನ್ನಯ್ಯನ ಪರಿಚಯಿಸಿ ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ಕೂಡ ತಂದುಕೊಟ್ಟಿದ್ದ. ಬುರುಡೆಯು ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಸ್ಥಿಪಂಜರದ ಅವಶೇಷವಾಗಿದೆ. ಬುರುಡೆ ಗ್ಯಾಂಗ್‌ಗೂ ಮೊದಲೇ ವಿಠಲಗೌಡನಿಗೆ ಚಿನ್ನಯ್ಯ ಪರಿಚಿತನಾಗಿದ್ದ. ವಿಠಲಗೌಡ ನೇತ್ರಾವತಿ ಬಳಿ ಹಲವು ವರ್ಷಗಳ ಹಿಂದೆ ಹೋಟೆಲ್ ಹೊಂದಿದ್ದ. ಸೌಜನ್ಯ ಪ್ರಕರಣದ ಬಳಿಕ ಬೇರೆಡೆ ಹೋಟೆಲ್ ಸ್ಥಳಾಂತರಿಸಿದ್ದ. ನೇತ್ರಾವತಿ ಬಳಿ ಹೋಟೆಲ್‌ ಇದ್ದಾಗ ಚಿನ್ನಯ್ಯ ಬಂದು ಹೋಗುತ್ತಿದ್ದ. ಚಿನ್ನಯ್ಯ ಅನಾಥ ಶವ ಹಾಗೂ ಯುಡಿಆರ್ ಕೇಸ್‌ನ ಶವಗಳನ್ನು ದಫನ್‌ ಮಾಡುವುದನ್ನು ವಿಠಲಗೌಡ ಅರಿತಿದ್ದ. ಅದರಂತೆ ಗಿರೀಶ್ ಮಟ್ಟಣ್ಣವರ್ ರೂಪಿಸಿದ ಪ್ಲಾನ್‌ಗೆ ಚಿನ್ನಯ್ಯ ಪಾತ್ರಧಾರಿಯಾಗಬೇಕಾಯಿತು ಎನ್ನಲಾಗಿದೆ.


2014ರಲ್ಲಿ ಧರ್ಮಸ್ಥಳ ಬಿಟ್ಟಿದ್ದ ಚಿನ್ನಯ್ಯನ ಬಗ್ಗೆ ವಿಠಲಗೌಡನ ಬಳಿ ಇದ್ದ ಮಾಹಿತಿಯಂತೆ ಬುರುಡೆ ಟೀಂ ಹುಡುಕಾಟ ನಡೆಸಿತ್ತು. ಕೊನೆಗೆ ಚಿನ್ನಯ್ಯ ಸಿಕ್ಕ ಬಳಿಕ ಉಜಿರೆಯ ಹೋಟೆಲ್‌ನಲ್ಲಿ ಭೇಟಿ ಮಾಡಿದ್ದರು. ಅಲ್ಲಿ ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಹಾಗೂ ವಿಠಲಗೌಡ ಸಭೆ ನಡೆಸಿ ತಂತ್ರ ರೂಪಿಸಿದ್ದರು. ಬಳಿಕ ವಿಠಲಗೌಡ ಬುರುಡೆ ಕಥೆಯಲ್ಲಿ ನೇಪಥ್ಯಕ್ಕೆ ಸರಿದಿದ್ದ. ಇದೀಗ ಶನಿವಾರ ಸಂಜೆ ವಿಠಲಗೌಡನನ್ನು ಎಸ್‌ಐಟಿ ಬಂಗ್ಲೆ ಗುಡ್ಡೆಗೆ ಕರೆದುಕೊಂಡು ಹೋಗಿ ಅಲ್ಲಿ ಬುರುಡೆ ಸಿಕ್ಕ ಸ್ಥಳದ ಮಹಜರು ನಡೆಸಿದೆ.


ಇಡೀ ಪ್ರಕರಣದಲ್ಲಿ ಈ ಬುರುಡೆಯ ಸುತ್ತ ಹಲವು ಕತೆಗಳನ್ನು ಹೆಣೆಯಲಾಗಿತ್ತು. ಆದರೆ ಅದೆಲ್ಲದಕ್ಕೂ ಇದೀಗ ಕೊನೆಯಾಗಿದ್ದು ತಲೆಬುರುಡೆಯನ್ನು ಇದೇ ಸ್ಥಳದಿಂದ ತೆಗೆದಿರುವುದು ತನಿಖೆಯಿಂದ‌ ಬಹಿರಂಗಗೊಂಡಿದೆ. ಈ ಪ್ರಕರಣದಲ್ಲಿ ಬುರುಡೆಯನ್ನು ಮೊದಲು‌ ನೋಡಿರುವ ವಿಠಲಗೌಡ ಹಾಗೂ ಜಯಂತ್ ಅವರೊಂದಿಗೆ ಸ್ಥಳಕ್ಕೆ ತೆರಳಿದ‌ ಎಸ್‌ಐಟಿ ಅಧಿಕಾರಿಗಳು ಸ್ಥಳ‌ ಮಹಜರು ನಡೆಸಿದ್ದಾರೆ. ಈ ಪ್ರಕರಣದ ಸತ್ಯ ಹೊರಗೆ ಬಂದಿರುವುದರಿಂದ ವಿಠಲ ಗೌಡನನ್ನು ಬಂಧಿಸುವ ಸಾಧ್ಯತೆ ಇದೆ.

Recently Updated:

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.
ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ  ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ವಿಕೃತಕಾಮಿಯ ಬಂಧನ.ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತಕಾಮಿಯ ಬಂಧನ.
ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.