ಕಾರ್ಯಕ್ರಮವನ್ನು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಶ್ರೀ ಲಕ್ಷ್ಮಣ ಸವದಿವಯರು ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನೀಯರ ತ್ಯಾಗ ಬಲಿದಾನಗಳನ್ನು ಸ್ಮರಿಸಿ,ಕನ್ನಡ ಭಾಷೆ, ಸಂಸ್ಕೃತಿ ಮತ್ತು ನಮ್ಮ ನಾಡಿನ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕಾ ದಂಡಾಧಿಕಾರಿಗಳಾದ ಶ್ರೀ ಸಿದ್ದರಾಯ ಬೋಸಗಿ,ಪೊಲೀಸ ಅಧಿಕಾರಿಗಳಾದ ಶ್ರೀ ಪ್ರಶಾಂತ ಮುನ್ನೊಳ್ಳಿ ಹಾಗೂ ಅಥಣಿ ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಕ್ಕಂಚ್ಚಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ದತ್ತಾ ವಾಸ್ಟರ ಹಾಗೂ ಪುರಸಭೆ ಸರ್ವ ಸದಸ್ಯರು, ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಕನ್ನಡಪರ ಹೋರಾಟಗಾರರು ಶಿಕ್ಷಕ, ಶಿಕ್ಷಕಿಯರು ವಿಧ್ಯಾರ್ಥಿಗಳು ಹಾಗೂ ಮಾದ್ಯಮ ಮಿತ್ರದವರು ಉಪಸ್ಥಿತರಿದ್ದರು.








