ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ವಿಜಯಪುರ ಜಿಲ್ಲೆಯಿಂದ ಕಲಬುರಗಿಯತ್ತ ಕಾರಿನಲ್ಲಿ ಬರುತ್ತಿದ್ದಾಗ, ಜೇವರ್ಗಿ ತಾಲೂಕಿನ ಗೌನಳ್ಳಿ ಸಮೀಪ ಈ ದುರಂತ ನಡೆದಿದೆ
ಮಹಾಂತೇಶ್ ಸೇರಿದಂತೆ ಕಾರಿನಲ್ಲಿದ್ದ ಇತರ ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಮೊದಲು ದಾವಣಗೆರೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಬೆಸ್ಕಾಂನ ಎಂಡಿಯಾಗಿದ್ದರು. ಚಾಲಕನ ನಿಯಂತ್ರಣ ತಪ್ಪಿ ಇನ್ನೊವಾ ಕಾರು ಪಲ್ಟಿಯಾದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಮಣ್ಣೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬೀಳಗಿ ಅವರು ಅಸುನೀಗಿದ್ದಾರೆ.
ಇನ್ನು ಸುದ್ದಿ ತಿಳಿದ ಕೂಡಲೇ ಆಸ್ಪತ್ರೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿ ಇತರ ಅಧಿಕಾರಿಗಳು ದೌಡಾಯಿಸಿದ್ದಾರೆ.
ಬೆಸ್ಕಾಂ ಎಂಡಿ ಅಪಘಾತ ಸಾವು
ಖನಿಜ ನಿಗಮದ ಎಂಡಿ ಆಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ 5. ಈ ದುರ್ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಬಳಿ ನಡೆದಿದೆ ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ 3. ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಮಹಾಂತೇಶ್ ಬೀಳಗಿ ಅವರಿಗೆ ಗಂಭೀರ ಗಾಯಗಳಾಗಿದ್ದವು 2. ಅಪಘಾತವು ಜೇವರ್ಗಿ ಬಳಿ ಇರುವ ಗೌನಳ್ಳಿ ಕ್ರಾಸ್ ಬಳಿ ಸಂಭವಿಸಿದೆ 8. ಕಾರು ಚಾಲಕನು ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಪ್ರಯತ್ನಿಸಿದಾಗ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ 9. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ








