ಕಾರ್ಕಳ, ಹೆಬ್ರಿ ವಲಯದ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಪದಗ್ರಹಣ ಪತ್ರಕರ್ತರ ಒಗ್ಗಟ್ಟು ಮತ್ತು ಹಿತರಕ್ಷಣೆಗೆ ಗಣ್ಯರ ಕರೆ.

12 Feb 2026
ಕರಾವಳಿ

ಕಾರ್ಕಳ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (ರಿ.) ಬೆಂಗಳೂರು ಇದರ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಶಾಖೆಗಳ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಬುಧವಾರ ಕಾರ್ಕಳದ ಹೋಟೆಲ್ ಪ್ರಕಾಶ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.


*ಪತ್ರಕರ್ತರಿಗೆ ಸಾಮಾಜಿಕ ತುಡಿತವಿರಲಿ: ಜಿ.ಎಂ. ರಾಜಶೇಖರ್*

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಜಿ.ಎಂ. ರಾಜಶೇಖರ್, "ಪತ್ರಕರ್ತನ ಪಟ್ಟದಲ್ಲಿ ಕುಳಿತರೆ ಸಾಲದು, ಪತ್ರಕರ್ತನಿಗೆ ಸಾಮಾಜಿಕ ತುಡಿತ ಬಹಳ ಅಗತ್ಯ. ಸರ್ಕಾರದ 'ಶಕ್ತಿ' ಯೋಜನೆಯಡಿ ಮಹಿಳೆಯರಿಗೆ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುವಾಗ, ಸಮಾಜದ ಒತ್ತಡದ ನಡುವೆ ಬದುಕುವ ಗ್ರಾಮೀಣ ಪತ್ರಕರ್ತರಿಗೆ ಇಂತಹ ಸೌಲಭ್ಯಗಳನ್ನು ಸರ್ಕಾರ ಏಕೆ ನೀಡುತ್ತಿಲ್ಲ?" ಎಂದು ಪ್ರಶ್ನಿಸಿದರು. ಪತ್ರಕರ್ತರ ಆರೋಗ್ಯದ ಹಿತ ಕಾಪಾಡಲು ಸರ್ಕಾರ ಮುಂದಾಗಬೇಕು ಎಂದ ಅವರು, ಸಂಘದ ವತಿಯಿಂದ ಆರೋಗ್ಯಕ್ಕಾಗಿ ಸಸಿ ನೆಡುವ ಹಾಗೂ ಕಣ್ಣುದಾನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಪತ್ರಕರ್ತರ ಬದುಕು ನಿಷ್ಠುರವಾದುದು, ಅವರ ಸಮಸ್ಯೆಗಳನ್ನು ಸರ್ಕಾರ ಅರಿಯಬೇಕು. ಜಾಹೀರಾತು ನೀಡಿ ಪತ್ರಿಕೆ ಬೆಳೆಸುವ ಕರಾವಳಿಯ ಜನರೇ ಇಲ್ಲಿನ ಮಾಧ್ಯಮಗಳ ಅನ್ನದಾತರು, ಅವರ ನಂಬಿಕೆ ಉಳಿಸುವ ಕೆಲಸ ಪತ್ರಕರ್ತರಿಂದ ಆಗಬೇಕು ಮತ್ತು ಮಹಿಳಾ ಪತ್ರಕರ್ತೆಯರ ಮತ್ತು ಪತ್ರಕರ್ತರ ಮೇಲಿನ ದಬ್ಬಾಳಿಕೆ ತಡೆಯಲು ಕಾನೂನು ಭದ್ರತೆ ಅಗತ್ಯ ಎಂದು ಅವರು ತಿಳಿಸಿದರು.

*ಪತ್ರಕರ್ತರಲ್ಲಿ ಆತ್ಮಾವಲೋಕನ ಅಗತ್ಯ: ಶಾಸಕ ವಿ. ಸುನಿಲ್ ಕುಮಾರ್*

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, "ಪತ್ರಿಕೋದ್ಯಮವು ತನಗೆ ಅನೇಕ ಜೀವನ ಪಾಠಗಳನ್ನು ಕಲಿಸಿದೆ. ಕಾರ್ಕಳದ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ. ಇಲ್ಲಿನ ಪತ್ರಕರ್ತರ ನಡುವೆ ಇರುವ ಸಣ್ಣಪುಟ್ಟ ಗೊಂದಲಗಳನ್ನು ನಿವಾರಿಸಿ ಎಲ್ಲರೂ ಒಗ್ಗಟ್ಟಾಗಿ ಸಾಗಬೇಕು" ಎಂದು ಕಿವಿಮಾತು ಹೇಳಿದರು. 1975ರ ತುರ್ತು ಪರಿಸ್ಥಿತಿಯಲ್ಲಿ ಪತ್ರಿಕಾ ಧರ್ಮವನ್ನು ಹತ್ತಿಕ್ಕುವ ಪ್ರಯತ್ನ ನಡೆದಿತ್ತು, ಇಂದು ಮುದ್ರಣ ಮಾಧ್ಯಮ ಕ್ಷೀಣಿಸುತ್ತಿರುವುದು ದುರ್ದೈವ. ಪತ್ರಿಕೆ ಅಥವಾ ವೆಬ್ ಚಾನೆಲ್‌ಗಳು ಯಾರದ್ದೋ ಮುಖವಾಣಿಯಾಗದೆ, ಸುದ್ದಿಯಲ್ಲಿ ತಾರತಮ್ಯ ಮಾಡದೆ ಸಮಾಜದ ಸ್ವಾಸ್ಥ್ಯ ಕಾಪಾಡಬೇಕು. ಮುಂಬರುವ ಬಾಹುಬಲಿ ಮಸ್ತಕಾಭಿಷೇಕದಂತಹ ಪವಿತ್ರ ಕಾರ್ಯಕ್ರಮಗಳನ್ನು ಜಗತ್ತಿಗೆ ಪರಿಚಯಿಸುವ ಕೆಲಸ ನಿಮ್ಮಿಂದಾಗಲಿ ಎಂದರು.

*ಬಸ್ ಪಾಸ್ ಬೇಡಿಕೆ ಈಡೇರಿಸಲು ಪ್ರಯತ್ನ:ಉದಯ ಶೆಟ್ಟಿ ಮುನಿಯಾಲು*

ಉದಯ ಕೃಷ್ಣ ಚಾರಿಟೇಬಲ್ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಸಮಾಜದ ಅಂಕುಡೊಂಕು ತಿದ್ದುವ ಶಕ್ತಿ ಪತ್ರಕರ್ತರಿಗಿದೆ. ಕಾರ್ಕಳದ ಹತ್ತಾರು ಅಭಿವೃದ್ಧಿ ಬೇಡಿಕೆಗಳನ್ನು ಸವಿವರವಾಗಿ ಸರ್ಕಾರದ ಮುಂದೆ ಪ್ರಸ್ತುತಪಡಿಸುವ ಕೆಲಸವಾಗಲಿ. ಪತ್ರಕರ್ತರ ಉಚಿತ ಬಸ್ ಪಾಸ್ ಬೇಡಿಕೆಯ ಬಗ್ಗೆ ನಾನು ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.

**ಸತ್ಯಾಸತ್ಯತೆಯ ಗೊಂದಲಗಳ ನಡುವೆ ಪತ್ರಿಕೋದ್ಯಮ*

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಅಧ್ಯಕ್ಷೆ ಮಿತ್ರ ಪ್ರಭಾ ಹೆಗ್ಡೆ ಮಾತನಾಡಿ, "ಡಿಜಿಟಲ್ ಯುಗದಲ್ಲಿ ಎಲ್ಲವೂ ಬೆರಳ ತುದಿಯಲ್ಲಿ ಸಿಗುತ್ತಿದೆ. ಗೂಗಲ್ ಎಲ್ಲವನ್ನೂ ನೀಡುತ್ತದೆಯಾದರೂ ಸತ್ಯಾಸತ್ಯತೆ ಬಗ್ಗೆ ಗೊಂದಲಗಳು ಸೃಷ್ಟಿಯಾಗುತ್ತಿವೆ. ಪತ್ರಿಕೋದ್ಯಮದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಜವಾಬ್ದಾರಿ" ಎಂದರು. ಫೆಡರೇಷನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ ಅಸೋಸಿಯೇಷನ್ ರಾಜ್ಯಾಧ್ಯಕ್ಷ ಡಾ. ರವೀಂದ್ರ ಶೆಟ್ಟಿ ಮಾತನಾಡಿ, ಪತ್ರಕರ್ತರ ಒಗ್ಗಟ್ಟಿನಿಂದ ಮಾತ್ರ ಅವರ ಹಿತಾಶಕ್ತಿ ಕಾಪಾಡಲು ಸಾಧ್ಯ ಎಂದರು. ಉದ್ಯಮಿ ಬೋಳ ಪ್ರಶಾಂತ್ ಕಾಮತ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

*ಗೌರವಾರ್ಪಣೆ ಮತ್ತು ಪದಗ್ರಹಣ*

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷೆ ನಳಿನಿ ಎಸ್. ಸುವರ್ಣ ಅವರು ಸಂಘಟನೆಯನ್ನು ಮುನ್ನಡೆಸಲು ಎಲ್ಲರ ಸಹಕಾರ ಕೋರಿದರು. ಸಂಘದ ರಾಜ್ಯ ಕಾರ್ಯದರ್ಶಿ ವಸಂತ್ ಕುಮಾರ್ ಪ್ರಸ್ತಾವನೆಯೊಂದಿಗೆ ಸಂಘದ ಹಿಂದಿನ ಅನುಭವಗಳನ್ನು ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಅಧಿಕೃತ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಸಂಘದ ರಾಜ್ಯಾಧ್ಯಕ್ಷರು ಹಾಗೂ ರಾಜ್ಯ ಕಾರ್ಯದರ್ಶಿ ಹಾಗೂ ಎನ್.ಪಿ. ಗ್ರೂಪ್ಸ್ ಮಾಲಕ ವಾಸುದೇವ ಭಟ್ ನೆಕ್ಕರೆಪಲ್ಕೆ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಕೃಷ್ಣಪ್ಪ, ಉಡುಪಿ ಜಿಲ್ಲಾಧ್ಯಕ್ಷ ಎಂ.ಎನ್. ಕೊಟ್ಟಾರಿ ಉಪಸ್ಥಿತರಿದ್ದರು. ಅಬೂಬುಕರ್ ಸ್ವಾಗತಿಸಿ, ಸೌಮ್ಯ ನಿರೂಪಿಸಿದರು. ವೇದಿಕೆಯಲ್ಲಿದ್ದ ಗೌರವಾಧ್ಯಕ್ಚ ಬಾಲಕೃಷ್ಣ ಭೀಮಗುಳಿ ವಂದಿಸಿದರು. ಕಾರ್ಯಕ್ರಮದಲ್ಲಿ 150ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

Recently Updated:

ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ  ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.ಕಾರ್ಕಳದಲ್ಲಿ ವಿಶ್ವಕರ್ಮ ಸಮಾಜ ಹಾಗೂ ಕುಲಾಲ ಸಮಾಜದ ಕುಟುಂಬ ಮೇಲೆ ದೌರ್ಜನ್ಯ ಕಣ್ಣು ಮುಚ್ಚಿ ಕೂತ ಜನ ಪ್ರತಿನಿಧಿಗಳು, ಆಡಳಿತ ವ್ಯವಸ್ಥೆ.! ನಮಗೆ ಅನ್ಯಾಯ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ ಎನ್ನುತ್ತಾ ಸಮಾಜದ ಎದುರು ಕೈ ಚಾಚುತ್ತಿರುವ ಈ ಕುಟುಂಬ ಕಾರ್ಕಳದ ಕುಕ್ಕುಂದೂರುನದ್ದು.
ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.   ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)ಯ‌ ವಾರ್ಷಿಕ ಶಿಬಿರ ಫೆ. 28ರಿಂದ 7 ದಿನಗಳ ಕಾಲ ಜಾರ್ಕಳ ಮುಂಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ನಡೆದಿದ್ದು ಮಾ. 6ರಂದು ಸಮಾರೋಪ ಸಮಾರಂಭ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ  ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು  ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ  2.00000.ಮೊತ್ತದ ಮಂಜೂರಾತಿ..     ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರು ಹೊಸ್ಮಾರು ಕುಲಾಲ ಸಮುದಾಯ ಭವನದ ಅಭಿವೃದ್ಧಿಗೆ 2.00000.ಮೊತ್ತದ ಮಂಜೂರಾತಿ..
ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ  ಮತ್ತು ಮಹಾಪೂಜೆ ನಡೆಯಲಿದೆ..ಹೊರ್ನಾಡಿ ವಲಕುತ್ತೂರು ಪುರಾತನ ಇತಿಹಾಸ ತಕಾಲದ ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಏಕವಾರ ಮಹಾರುದ್ರಾಭಿಷೇಕ ಮತ್ತು ಮಹಾಪೂಜೆ ನಡೆಯಲಿದೆ..
ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.ಕಾರ್ಕಳದ ಕಾಂಗ್ರೆಸ್‌ ನಾಯಕ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಗುರುವಾರ ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ ೧೯ರಿಂದ ೨೧ ತನಕ ನಡೆಯುವ ಏಕಪವಿತ್ರ ಶ್ರೀಮನ್ನಾಗಮಂಡಲದ ಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದರು.
ಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿ
ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ  65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.
ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ  65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.ಉಡುಪಿ ಎಂಜಿಎಂ ಕಾಲೇಜ್ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಕೆನೆಟಿಕ್ ಹೋಂಡಕ್ಕೆ ಮಹೇಂದ್ರ ಪಿಕಪ್ ಡಿಕ್ಕಿ ಸ್ಥಳದಲ್ಲಿ 65 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ದುರ್ಮರಣ.
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸುಮಾರು 50 ಲಕ್ಷ ವೆಚ್ಚದ ಕುಡಿಯುವ ನೀರಿನ ಸರ್ಕಾರದ ಯೋಜನೆಯನ್ನು ಹೊಳೆಯ ಗೊಚ್ಚ  ನೀರನ್ನು ಬಾವಿಗೆ ಬಿಟ್ಟು ಗ್ರಾಮಸ್ಥರಿಗೆ ಕುಡಿಸಿದ  ಗ್ರಾಮ ಪಂಚಾಯಿತಿ ಆಡಳಿತ.!?ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸುಮಾರು 50 ಲಕ್ಷ ವೆಚ್ಚದ ಕುಡಿಯುವ ನೀರಿನ ಸರ್ಕಾರದ ಯೋಜನೆಯನ್ನು ಹೊಳೆಯ ಗೊಚ್ಚ ನೀರನ್ನು ಬಾವಿಗೆ ಬಿಟ್ಟು ಗ್ರಾಮಸ್ಥರಿಗೆ ಕುಡಿಸಿದ ಗ್ರಾಮ ಪಂಚಾಯಿತಿ ಆಡಳಿತ.!?