ಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿ

13 Feb 2026
ಕರಾವಳಿ

ತಹಶೀಲ್ದಾರ್‌ ಪ್ರದೀಪ್‌ ಆರ್. ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೊದಲು ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಯ ಅನುಪಸ್ಥಿತಿಯ ಬಗ್ಗೆ ಸೇರಿದ ಜನತೆ ಆಕ್ರೋಶ ವ್ಯಕ್ತಪಡಿಸಿದರು. ಪ.ಜಾ. -ಪ.ಪಂ. ಮುಖಂಡರು ಮೊದಲು ಅಧಿಕಾರಿಗಳಲ್ಲಿನ ಸಮಸ್ಯೆ ಪರಿಹರಿಸಿಕೊಳ್ಳಿ ಆಮೇಲೆ‌‌ ನಮ್ಮನ್ನು ಸಭೆಗೆ ಕರೆಸಿ ಎಂದು ತರಾಟೆಗೆತ್ತಿಕೊಂಡರು. ಅಧಿಕಾರಿಗಳಿಗೆ ನಮ್ಮ ಸಮುದಾಯದ ಬಗ್ಗೆ ಅಸಡ್ಡೆ ಏಕೆ ? ಎಂದು ಪ್ರಶ್ನಿಸಿದ ಅವರು ಹೆಚ್ಚಿನ ಅಧಿಕಾರಿಗಳು ಸಭೆಯಲ್ಲಿರದ ಕಾರಣ ಸಭೆ ತೊರೆದರು.


ಕಾರ್ಕಳ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಜ. 13 ರಂದು ನಡೆದ‌ ತಾಲೂಕು ಮಟ್ಟದ ಪ. ಜಾ. ಹಾಗೂ ಪ.ಪಂ. ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಪೂರ್ವಭಾವಿ ಸಭೆಯಲ್ಲಿ ಸುಮಾರು 57 ಅಹವಾಲುಗಳು ಬಂದಿದ್ದವು. ಮತ್ತಾವು ಸೇತುವೆ, ಈದು ಗ್ರಾಮದಲ್ಲಿ ಪ.ಜಾ-ಪ.ಪಂ.ದವರ ಜಾಗದ ಸಮಸ್ಯೆ, ನೂರಾಲ್‌ಬೆಟ್ಟಿನಲ್ಲಿ ಮೂಲಸೌಕರ್ಯಗಳ ಕೊರತೆ, ಶಾಲೆಗಳಲ್ಲಿ ಅಕ್ಷರ ದಾಸೋಹ ಸಮಸ್ಯೆ, ಗಣಿ ಇಲಾಖೆ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಮುದಾಯದ ಜನತೆ ಸಭೆಯಲ್ಲಿ ಭಾಗಿಯಾಗಿದ್ದರು. ಆದರೆ, ಮುಖ್ಯವಾಗಿ ಬೇಕಿದ್ದ ಅಧಿಕಾರಿಗಳೇ ಸಭೆಯಲ್ಲಿ ಹಾಜರಿರದ ಕಾರಣ ಅವರು ಸಭೆಯನ್ನು ತೊರೆದರು.


ಸಭೆಗೆ ದೌಡಾಯಿಸಿದ ಅಧಿಕಾರಿಗಳು

ಆರಂಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಭೆಯಲ್ಲಿರಲಿಲ್ಲ. ಆದರೆ, ಅವರು ಕೆಲ ಹೊತ್ತಿನ ಬಳಿಕ ಸಭೆಯಲ್ಲಿ ಕಾಣಿಸಿಕೊಂಡರು. ಇಲಾಖಾಧಿಕಾರಿಗಳು ಇಲ್ಲದ ಕುರಿತು ಜನತೆ ಆಕ್ರೋಶಗೊಂಡು ಸಭೆ ಬಹಿಷ್ಕರಿಸಿದ ಮಾಹಿತಿ ತಿಳಿದ ಇತರೆ ಇಲಾಖಾಧಿಕಾರಿಗಳು ಒಬ್ಬೊಬ್ಬರಾಗಿ ಸಭೆಗೆ ಆಗಮಿಸಿದರು.


ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ್‌ ಮಾತನಾಡಿ, ಯಾವ ಇಲಾಖೆಯಲ್ಲಿ ಉಪಸ್ಥಿತರಿರಬೇಕಿದ್ದ ಅಧಿಕಾರಿಗಳ ಪರವಾಗಿ ಬೇರೆಯವರು ಹಾಜರಾಗಿದ್ದರೋ ಆ ಇಲಾಖೆಯನ್ನು ಗೈರು ಎಂದು ಪರಿಗಣಿಸಲಾಗುವುದು. ಮತ್ತೊಮ್ಮೆ ಎಲ್ಲಾ ಇಲಾಖೆಗಳಿಗೆ ನೋಟಿಸ್‌ ಕಳುಹಿಸಿ ಮುಂದಿನ ಸಭೆಯ ದಿನವನ್ನು ನಿಗದಿಗೊಳಿಸಲಾಗುವುದು ಎಂದರು.

Recently Updated:

ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಸಮಗ್ರ ಪ್ರಗತಿಗೆ ವೇಗ : ಯಶ್ ಪಾಲ್ ಸುವರ್ಣ.
ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ  ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ. ಅಂತರ್ ಜಿಲ್ಲಾ ಭಜನಾ ಸ್ಪರ್ಧೆಯ ಅಂಗವಾಗಿ ಶ್ರೀ ವಡಭಾಂಡೇಶ್ವರ ಬಲರಾಮ ದೇವತಾನದಿಂದ ಆನಂದ ಶರಧಿಗೆ ಭವ್ಯ ದೀಪದ ಶೋಭಾಯಾತ್ರೆ.
ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!ಕತ್ತಲಲ್ಲಿ ಕಲ್ಮಶ: ಕರಾವಳಿಯ ಕಣ್ಣೀರ ಕಥೆ"* ಕಪ್ಪು, ಕೆಂಪು, ರಾಸಾಯನಿಕ ವಾಸನೆಯ ನೀರನ್ನು ನೇರವಾಗಿ ಅರಬ್ಬಿ ಸಮುದ್ರಕ್ಕೆ ಸುರಿಯುತ್ತಿವೆ.!!
ಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನಕಾರ್ಕಳ: ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ಐವರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳ ಬಂಧನ
ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ  ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...ಕೋಟ ಆನಂದ್ ಕುಂದರ್ ಮಾಲೀಕತ್ವದ ಜನತಾ ಫಿಶ್ ಮೀಲ್ ಕಾರ್ಮಿಕರಿಂದ ತನ್ನ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ, 'ಸ್ವಚ್ಛ ಭಾರತ' ಅಭಿಯಾನಕ್ಕೆ ಭಾರಿ ಬೆಂಬಲ ನೀಡುತ್ತಿದೆ...
ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.ನಿರ್ದಿಷ್ಟ ಸಮಯದಲ್ಲಿ, ಸಾಂದರ್ಭಿಕವಾಗಿ ಆರೋಗ್ಯ ತಪಾಸಣೆ ಅವಶ್ಯ - ಸುನಿಲ್‌ ಕುಮಾರ್‌.
ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.ಮೂಡಬಿದ್ರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಗಳಿಗೆ ಪುರಾವೆ ದೊರೆತಿಲ್ಲ.
ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ  ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ವಿಕೃತಕಾಮಿಯ ಬಂಧನ.ಮಂಗಳೂರು: ಗೃಹಮಿಂಗ್ ವಿಧಾನ ಬಳಸಿ ಆರೋಪಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಕೃತಕಾಮಿಯ ಬಂಧನ.
ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.ಮೂಡುಬಿದ್ರೆ ಮಹಿಳೆಯರ ಜೊತೆಗೆ ದುರ್ನಡತೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು. ಇನ್ಸ್‌ಪೆಕ್ಟರ್ ವಿರುದ್ಧ ಧ್ವನಿ ಎತ್ತಿದ ಮತ್ತೊಬ್ಬ ಮಹಿಳೆ ಅವಿತಾ ಮಿನೆಜಸ್.