ಬೆಂಗಳೂರು ಫೆ.8:ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಎಂದು ನಟ ದರ್ಶನ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ.
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನನ್ನ ಪ್ರೀತಿಯ ಮನವಿ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಕ್ಷಮೆ ಇರಲಿ ಇಂತಿ ನಿಮ್ಮ ದಾಸ ದರ್ಶನ್ ಎಂದು ನಟ ದರ್ಶನ್ ಫೇಸ್ ಬುಕ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ನಾನು ಏನೇ ಪದ ಬಳಕೆ ಮಾಡಿದರೂ ಅದು ಕಮ್ಮಿ, ನೀವು ತೋರಿಸಿದ ಅಭಿಮಾನ ಬಹಳ ದೊಡ್ಡದು…ಮುಂದಿನ ವಾರ ನನ್ನ ಬರ್ತ್ ಡೇ ಇದೆ… ನನಗೂ ತುಂಬಾ ಆಸೆ ಇತ್ತು..
ಸ್ಪೈನಲ್ ಕಾರ್ಡ್ ಸಮಸ್ಯೆ ಆಗಿರೋದು ಎಲ್ಲರಿಗೂ ಗೊತ್ತಿದೆ. ನಾನು ಆಪರೇಶನ್ ಮಾಡಿಸಲೇಬೇಕು. ನನ್ನ ಕಾಲು ಈಗಾಗಲೇ ನಂಬ್ ಆಗ್ತಿದೆ. ಹೀಗಾಗಿ ಆರೋಗ್ಯದ ಕಡೆಗೆ ಗಮನ ಕೊಡಲೇಬೇಕು.
ಎಲ್ಲರನ್ನೂ ಮೀಟ್ ಮಾಡಬೇಕೆಂದು..ಆದರೆ ನನಗೆ ಹೆಲ್ತ್ ಪ್ರಾಬ್ಲಂ ಇದೆ..ತುಂಬಾ ಹೊತ್ತು ನಿಲ್ಲಲು ಆಗುತ್ತಿಲ್ಲ… .
ನಾನು ಹಾಗೂ ಜೋಗಿ ಪ್ರೇಮ್ ಮತ್ತೆ ಸಿನಿಮಾ ಮಾಡ್ತೀವಿ. ನಮ್ಮ ಗುರುಗಳು, ರಕ್ಷಿತಾ ಆಸೆ ಆಗಿದ್ದಕ್ಕೆ ನಾನು ಖಂಡಿತ ಪ್ರೇಮ್ ಜೊತೆ ಸಿನಿಮಾ ಮಾಡ್ತೀನಿ. ಕೆವಿಎನ್ ಪ್ರೊಡಕ್ಷನ್ಸ್ ಅವರು ಈಗಾಗಲೇ ಬೇರೆ ಸಿನಿಮಾ ಮಾಡುತ್ತಿದ್ದಾರೆ. ಯಾವುದೇ ಪ್ರೊಡಕ್ಷನ್ಸ್ ಆಗಿರಲೀ, ಇಂದಿನ ಕಾಲಘಟಕ್ಕೆ ಸಿನಿಮಾ ಮಾಡೋದು ಸುಲಭ ಇಲ್ಲ. ದುಡ್ಡು ಹೊಂದಿಸೋದು ಒಂದೇ ನಿರ್ಮಾಪಕನ ಕೆಲಸ ಅಲ್ಲ, ಇನ್ನೂ ಕೆಲಸ ಇರತ್ತೆ. ಅಡ್ವಾನ್ಸ್ ಹಣ ಕೊಟ್ಟು, ರಿಲೀಸ್ ಆಗುವವರೆಗೆ ನಿರ್ಮಾಪಕನ ಕೆಲಸ ಜಾಸ್ತಿ ಇರುತ್ತದೆ.
ಬೇರೆ ಸಿನಿಮಾ ಜೊತೆ ನನ್ನ ಸಿನಿಮಾ ಮಾಡೋದು ಕೂಡ ಸವಾಲಿನ ಕೆಲಸ ಆಗತ್ತೆ. ನನ್ನಂಥವನ ಮೇಲೆ ನೀವು ಕೊಟ್ಟ ಪ್ರೀತಿಗೆ ಬೆಲೆ ಕಟ್ಟೋಕೆ ಆಗೋದಿಲ್ಲ. ನನ್ನ ನಂಬಿಕೊಂಡ ಎಲ್ಲರಿಗೂ ಧನ್ಯವಾದಗಳು. ಎಲ್ಲ ಟೈಮ್ನಲ್ಲೂ ಜೊತೆಗಿದ್ದ ನಟ ಧನ್ವೀರ್, ಪ್ರಾಣಸ್ನೇಹಿತೆ ರಕ್ಷಿತಾ ಪ್ರೇಮ್, ಬುಲ್ಬುಲ್ ರಚಿತಾ ಪ್ರೇಮ್ಗೆ ಧನ್ಯವಾದಗಳು.
ನಾನು ಬೇರೆ ಭಾಷೆಗೆ ಹೋಗ್ತೀನಿ ಅಂತ ಹೇಳಲಾಗಿತ್ತಂತೆ. ನನಗೆ ಇಲ್ಲೇ ಇಷ್ಟು ಪ್ರೀತಿ ಸಿಕ್ಕಿದೆ ಅಂದ್ಮೇಲೆ ನಾನ್ಯಾಕೆ ಬೇರೆ ಕಡೆ ಹೋಗಲಿ? ಸಾಯೋವರೆಗೂ ನಾನು ಇಲ್ಲೇ ಇರ್ತೀನಿ. ಕಾವೇರಿ ಕೊಡಗಿನಲ್ಲಿ ಹುಟ್ಟಿ ಬೇರೆ ಕಡೆ ಹರಿಯುತ್ತಾಳೆ. ನಾನು ಕೊಡಗಿನಲ್ಲಿ ಹುಟ್ಟಿದ್ದೇನೆ. ನಾನು ಸೀಮಿತ ಆಗಿರೋದು ಮೇಕೆದಾಟುವರೆಗೆ ಮಾತ್ರವೇ. ನನ್ನ ಸಿನಿಮಾಗಳು ಬೇರೆ ಭಾಷೆಗೆ ಡಬ್ ಆಗಬಹುದು, ಆದರೆ ನಾನು ಇಲ್ಲೇ ಇರ್ತೀನಿ. ನಾನು ಕನ್ನಡದಲ್ಲಿಯೇ ಇರ್ತೀನಿ, ಕನ್ನಡದಲ್ಲೇ ಸಿನಿಮಾ ಮಾಡ್ತೀನಿ. ನನ್ನ ಜನ್ಮದಿನಕ್ಕೆ ಶುಭಾಶಯ ತಿಳಿಸಿದ ಎಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ನಿಮ್ಮೆಲ್ಲರಿಗೂ ತಿಳಿಸುವೆ.
ಎಂದ ಚಕ್ರವರ್ತಿ.








