ಭೀಮಾತೀರದ ರಕ್ತ ಚರಿತ್ರೆ ಹಂತಕ ಭಾಗಪ್ಪ ಹರಿಜನ್‌ನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಕೊಚ್ಚಿ ಬಾಗಪ್ಪ ಹರಿಜನ್ ಭೀಕರ ಹತ್ಯ..!!

12 Feb 2025
ರಾಜ್ಯ

ವಿಜಯಪುರ:(ಫೆ.12): ಭೀಮಾತೀರದ ಹಂತಕ ನಟೋರಿ ಬಾಗಪ್ಪ ಹರಿಜನ್‌ನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ನಡೆದಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ 20ಕ್ಕೂ ಹೆಚ್ಚು ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ.



ಭೀಮಾತೀರದ ನಟೋರಿಯಸ್ ಹಂತಕ ಚಂದಪ್ಪನ ಶಿಷ್ಯನಾಗಿದ್ದ ಬಾಗಪ್ಪ ಹರಿಜನ್, ವಿಜಯಪುರ ಭೀಮಾತೀರ, ಕಲಬುರಗಿ ಸೇರಿದಂತೆ ಸುತ್ತಲು ಹಾವಳಿ ಇಟ್ಟಿದ್ದ ಬಾಗಪ್ಪ. ಕಳೆದ ಆಗಸ್ಟ್ 8, 2018ರಲ್ಲೇ ಕೋರ್ಟ್ ಆವರಣದಲ್ಲಿ ಪೀರಪ್ಪ ಹಡಪದ್ ಎಂಬುವವನಿಂದ ಬಾಗಪ್ಪ ಹರಿಜನ್ ಮೇಲೆ ಫೈರಿಂಗ್ ನಡೆದಿತ್ತು. ಆಗ ಸ್ವಲ್ಪದರಲ್ಲೇ ಬಚಾವ್ ಆಗಿದ್ದ. ಚಂದಪ್ಪ ಹರಿಜನ್‌ ಅಣ್ಣ ಯಲ್ಲಪ್ಪನ ಮಕ್ಕಳು ಸುಪಾರಿ ನೀಡಿದ್ದರು. ಹೀಗಾಗಿ ಈ ಹತ್ಯೆ ಪ್ರಕರಣದ ಹಿಂದೆ ಯಲ್ಲಪ್ಪ ಹರಿಜನ್ ಕೈವಾಡವಿದೆ ಎಂಬ ಮಾತುಗಳು ಕೂಡಾ ಕೇಳಿ ಬಂದಿವೆ. ಯಲ್ಲಪ್ಪ ಹರಿಜನ್ ಭೀಮಾ ತೀರದ ಅತ್ಯಂತ ನೊಟೋರಿಯಸ್ ಹಂತಕ ಚಂದಪ್ಪ ಹರಿಜನ್ ಅಣ್ಣನಾಗಿದ್ದಾನೆ.


ಸದ್ಯ ಘಟನೆ ಸ್ಥಳಕ್ಕೆ ಡಾಗ್ ಸ್ಕ್ವಾಡ್, ವಿಧಿ ವಿಜ್ಞಾ‌ನ ವಿಭಾಗದ ತಜ್ಞರ ಭೇಟಿ ನೀಡಿದ್ದಾರೆ. ಎಸ್‌ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ರಾಮನಗೌಡ ಹಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳು ಹಂತಕ ಬಾಗಪ್ಪನ ಎಡಗೈ ಹಾಗೂ ಮರ್ಮಾಂಗ ಕತ್ತರಿಸುವ ದುಷ್ಕರ್ಮಿಗಳು.



ಹತ್ಯೆ ಪ್ರಕರಣ ಕುರಿತು ಎಸ್ಪಿ ಮಾಹಿತಿ


ಭಾಗಪ್ಪ ಹರಿಜನ್ ಹತ್ಯೆ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿದ್ದು, ಬಾಗಪ್ಪ ಮದೀನಾ ನಗರದ ಬಾಡಿಗೆ ಮನೆಯಲ್ಲಿದ್ದ. ಇದೆ ಜಾಗದಲ್ಲಿ ನಾಲ್ಕೈದು ಜನರಿಂದ ಹತ್ಯೆ ಮಾಡಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನರು ಕೊಡಲಿ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಊಟ ಮಾಡಿಕೊಂಡು ಮನೆ ಎದುರು ಅಡ್ಡಾಡುತ್ತಿದ್ದ ಕೃತ್ಯ ಎಸಗಲಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಲ್ಲದೆ ಬಂದೂನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದರು.


ಕರೆಂಟ್ ಕಟ್ ಮಾಡಿ ಹತ್ಯೆ?


ಬಾಗಪ್ಪನ ಹತ್ಯೆಗೆ ಎಷ್ಟು ಜನರು ಬಂದಿದ್ದರು ಎಂದು ನಿಖರ ಮಾಹಿತಿ ಇಲ್ಲ ಎಂದು ಎಸ್ಪಿ ತಿಳಿಸಿದ್ದಾರೆ. ಮನೆಯವರು ನೀಡಿದ ಮಾಹಿತಿ ಆಧರಿಸಿ ಹೇಳುತ್ತಿದ್ದೇನೆ. ಇನ್ನು ಕರೆಂಟ್ ಕಟ್ ಮಾಡಿ ಹತ್ಯೆ ಮಾಡಿದ್ದ ಬಗ್ಗೆ ಮಾಹಿತಿ ಇಲ್ಲ. ಬಾಗಪ್ಪನ ಸಂಬಂಧಿಕರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ಬಾಗಪ್ಪ ಮೇಲೆ 10 ಕೇಸ್‌ಗಳಿವೆ, ಈ ಪೈಕಿ 6 ಮರ್ಡರ್ ಕೇಸ್ ಇವೆ. 1993 ರಿಂದ ಬಾಗಪ್ಪನ ಕ್ರಿಮಿನಲ್ ಹಿಸ್ಟರಿ ಶುರುವಾಗಿದೆ. 2016-17ರಲ್ಲಿ ಬಾಗಪ್ಪನ ಮೇಲೆ ಸೆಕ್ಯೂರಿಟಿ ಕೇಸ್ ಹಾಕಲಾಗಿತ್ತು. ಎಲ್ಲ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲಾ ಪೊಲೀಸ್ ತಂಡವಾಗಿ ಕೆಲಸ ಮಾಡುತ್ತಿದೆ ಎಂದು ಎಸ್ಪಿ ಮಾಹಿತಿ ನೀಡಿದರು.



ಹಲವು ಕೃತ್ಯ ಬಾಗಪ್ಪ ಭಾಗಿ


ಕಲಬುರ್ಗಿ, ವಿಜಯಪುರ ಭಾಗದ ಭೀಮಾತೀರದಲ್ಲಿ ಹಲವು ಕೃತ್ಯಗಳಲ್ಲಿ ಬಾಗಪ್ಪ ಭಾಗಿಯಾಗಿದ್ದ. 1998‌ ರಲ್ಲಿ‌ ಸಿಂದಗಿಯಲ್ಲಿ ಸ್ಟನ್ ಗನ್ ಬಳಸಿ ಗುಂಡು ಹಾರಿಸಿದ್ದ ಪ್ರಕರಣ ಸೇರಿದಂತೆ ಹಲವು ಕೇಸ್ಗಳಲ್ಲಿ ಈತನ‌ ಹೆಸರಿದೆ. ಕಳೆದ‌ 2018 ಆಗಸ್ಟ್ 8ರಲ್ಲಿ ಇದೆ ಬಾಗಪ್ಪ ಹರಿಜನ್ ಮೇಲೆ ಪೈರಿಂಗ್ ನಡೆದಿತ್ತು. ಪೀರಪ್ಪ ಹಡಪದ್ ಗುಂಡಿನ ದಾಳಿ ಮಾಡಿದ್ದ. ಪ್ರಕರಣದ‌ ವಿಚಾರಣೆಗೆ ಬಂದಾಗ ವಿಜಯಪುರದ ಕೋರ್ಟ್ ಆವರಣದಲ್ಲೇ ಮಧ್ಯಾಹ್ನದ ವೇಳೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆದು‌ ಗುಣಮುಖನಾಗಿದ್ದ.




ಭೀಮಾತೀರದ ಅತ್ಯಂತ ನೊಟೋರಿಯಸ್, ಉತ್ತರ ಕರ್ನಾಟಕದ ವೀರಪ್ಪನ್ ಎಂದೇ ಕರೆಯಲಾಗುವ ಹಂತಕ ಚಂದಪ್ಪ ಹರಿಜನ್ ಅಳಿಯ ಹಾಗೂ ಪಟ್ಟದ ಶಿಷ್ಯ ಈ ಬಾಗಪ್ಪ ಹರಿಜನ್. ಚಂದಪ್ಪ ಹರಿಜನ್ ಹೆಚ್ಚು ಕಡಿಮೆ 55 ಕೊಲೆ ಕೇಸ್'ಗಳ ಆರೋಪಿ. ಬಾಗಪ್ಪ ಚಿಕ್ಕ ವಯಸ್ಸಿನಲ್ಲೇ ಚಂದಪ್ಪನ ಗ್ಯಾಂಗ್ ಸೇರಿದ್ದ ಆತನೊಂದಿಗೇ ಓಡಾಡಿಕೊಂಡಿದ್ದ.


ಆದರೆ ಚಂದಪ್ಪ ಹರಿಜನ್ ಎನ್'ಕೌಂಟರ್ ಬಳಿಕ, ಚಂದಪ್ಪನ 13 ಗನ್'ಗಳನ್ನು ಹಂಚಿಕೊಳ್ಳುವ ವಿಚಾರದಲ್ಲಿ ಅಣ್ಣ ಯಲ್ಲಪ್ಪ ಹಾಗೂ ಅಳಿಯ ಬಾಗಪ್ಪರ ನಡುವೆ ದ್ವೇಷ ಬೆಳೆಯಿತು. ಅಲ್ಲದೇ ಕಲಬುರ್ಗಿಯ ಜಮೀನು ವಿಚಾರದಲ್ಲೂ ಇಬ್ಬರ ನಡುವೆ ವೈಮನಸ್ಸು ಬೆಳೆಯಿತು. ಇಲ್ಲಿಂದಲೇ ತಾನೇ ಚಂದಪ್ಪನ ಉತ್ತರಾಧಿಕಾರಿ ಎಂದು ಬಾಗಪ್ಪ ಹೇಳಿಕೊಳ್ಳಲಾರಂಭಿಸುತ್ತಾನೆ. ಇದರಿಂದಾಗಿ ಇಬ್ಬರೂ ಒಬ್ಬರನ್ನೊಬ್ಬರು ಹತ್ಯೆ ಮಾಡಲು ಯಲ್ಲಪ್ಪ ಯತ್ನಿಸುತ್ತಿದ್ದಾನೆ.


ಬಾಗಪ್ಪನ ಇಬ್ಬರು ಅಳಿಯಂದಿರನ್ನು ಯಲ್ಲಪ್ಪ ಕೊಲೆ ಮಾಡುತ್ತಾನೆ ಈ ಆರೋಪದಡಿಯಲ್ಲಿ ಯಲ್ಲಪ್ಪ ಜೈಲು ಪಾಲಾಗುತ್ತಾನೆ. 2013ರಲ್ಲಿ ಚಂದಪ್ಪನ ತಮ್ಮನನ್ನು ಬಸವರಾಜ್'ನನ್ನು ಕೊಲೆಯಾಗುತ್ತೆ. ಈ ರೀತಿಯಾಗಿ ಇಬ್ಬರ ನಡುವೆಯೂ ದ್ವೇಷ ಬೆಳೆಯುತ್ತದೆ. ಹಿಂದೆ ಕೋರ್ಟ್ ಆವರಣದಲ್ಲಿ ಬಾಗಪ್ಪನ ಮೇಲೆ ಐದು ಸುತ್ತಿನ ಗುಂಡಿನ ದಾಳಿ ನಡೆಸಲಾಗುತ್ತೆ. ಆದ್ರೆ ಅಂದು ಸ್ವಲ್ಪದರಲ್ಲೇ ಬಚಾವ್ ಆಗ್ತಾನೆ ಬಾಗಪ್ಪ. ಗುಂಡಿನ ದಾಳಿಯಿಂದ ಗಾಯಗೊಂಡ ಜಬಾಗಪ್ಪನನ್ನು ಹತ್ತಿರದ ಆಸ್ಪತ್ರೆಗೆ ದಾಖಲಾಗಿದೆ. ಪ್ರಾಣಾಪಾಯದಿಂದ ಪಾರಾಗ್ತಾನೆ. ಆದರೆ ಇದೀಗ ಎರಡನೇ ಯತ್ನದಲ್ಲಿ ಬಾಗಪ್ಪನನ್ನು ಮುಗಿಸಿರುವ ಗ್ಯಾಂಗ್.



ಶತ್ರು ನಾಶಕ್ಕಾಗಿ ದೇವರ ಪೂಜೆ ಪೂಜೆ


ಭಾಗಪ್ಪ ಹರಿಜನ ಆಲಮೇಲ ಸಮೀಪದ ಬ್ಯಾಡಗಿಹಾಳ ಗ್ರಾಮದವನು. ಇತ್ತೀಚೆಗೆ ಬ್ಯಾಡಗಿಹಾಳದಲ್ಲಿ ಲಕ್ಷ್ಮಿ ದೇವಿಯ ಗುಡಿ ಕಟ್ಟಿಸಲು 3 ಎಕರೆ ಭೂಮಿ‌ ನೀಡಿದ್ದ. ದೇವರ ಪೂಜೆ, ದೈವೀಕ ಕಾರ್ಯಗಳಲ್ಲಿ ಹೆಚ್ಚು ಮಗ್ನನಾಗಿದ್ದ ಬಾಗಪ್ಪ ಕಳೆದ 6-7 ವರ್ಷಗಳಿಂದ ಕಂಡಕಂಡ ದೇವರಿಗೆ ಕೈ ಮುಗಿದು ಪೂಜಿಸುತ್ತಿದ್ದ. ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಂತರ ಬಾಗಪ್ಪನಿಗೆ ಭಕ್ತಿ ಹೆಚ್ಚಾಗಿತ್ತು. ಗುಡಿ ಗುಂಡಾರಗಳನ್ನು ಸುತ್ತುತ್ತಿದ್ದಲ್ಲದೆ ಅನೇಕ ಪೂಜೆಗಳನ್ನೂ ಮಾಡಿಸುತ್ತಿದ್ದ. ಹಲವಾರು ಮಂದಿಯ ಶತ್ರುತ್ವ ಕಟ್ಟಿಕೊಂಡಿದ್ದ ಕಾರಣಕ್ಕೆ ಸಾವಿನ ಭಯ ಕಾಡ್ತಿತ್ತು. ಹೀಗಾಗಿ ಸಾವಿನ ಭಯ ದೂರಾಗಿಸಲು, ಮನಸ್ಸಿನ ಶಾಂತಿಗಾಗಿ ಪೂಜೆ ಮಾಡಿಸುತ್ತಿದ್ದ. ಶತ್ರುನಾಶಕ್ಕಾಗಿಯೂ ಪೂಜೆ ಮಾಡಿದ್ದ ಬಾಗಪ್ಪನೇ ಈಗ ಹತ್ಯೆಯಾಗಿದ್ದಾನೆ.

Recently Updated:

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ  ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.!  ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಳಹಳ್ಳಿಯ ಪಂಚಾಯತ್‌ನ ಹತ್ತಿರದಲ್ಲಿ ಮೊಬೈಲ್ ಟವರ್ ಇದ್ದರೂ, ಅಲ್ಲಿನ ನಿವಾಸಿಗಳು ಮಾತ್ರ ತೀವ್ರ ನೆಟ್‌ವರ್ಕ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.! ಇಲ್ಲಿಯ ಗ್ರಾಮಸ್ಥರು ಚುನಾಯಿತ ಜನಪ್ರತಿನಿಧಿಗಳಿಗೆ ದೂರು ನೀಡಿದರು ಜನಪ್ರತಿನಿಧಿಗಳು ಮಾತ್ರ ಮೌನಗೀತೆ ಸಂಗೀತದ
ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ತಕ್ಷಣ ಸಮಸ್ಯೆ ಪರಿಹರಿಸದಿದ್ದಲ್ಲಿ ಹೋಟೆಲ್ ಮಾಲೀಕರ ಸಂಘಟನೆಗೆ ಬೆಂಬಲ ನೀಡಿ ಬೀದಿಗಿಳಿದು ಪ್ರತಿಭಟನೆ ಮಾಡಲು ಕರೆ ನೀಡಲಾಗುವುದು,
ದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರದಕ್ಷಿಣ ಕನ್ನಡ ಉಡುಪಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಎಕ್ಸ್ ರೇ ಯಂತ್ರ ಹಸ್ತಾಂತರ
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದಿಂದ ಮುಖ್ಯಮಂತ್ರಿ ಭೇಟಿ ಪತ್ರಕರ್ತರ ಸೌಲಭ್ಯ ಕುರಿತಂತೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯ ಸಮಿತಿಯಿಂದ ಮುಖ್ಯಮಂತ್ರಿ ಭೇಟಿ.
ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ.. ಪೊಲೀಸಪ್ಪನ ಫೇಸ್ಬುಕ್ ಪಿಕ್ಲಾಟದ ಕಾಟ ತಾಳಲಾರದೆ ವಿಧವೆ ಮಹಿಳೆ ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ..
ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ  ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ  ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.ಬಾಗಲಕೋಟೆ: ಶಿವಾಜಿ ಮಹಾರಾಜರ ಭಾವ ಚಿತ್ರದ ಮೇಲೆ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಮಾಡಿದವರ ಮೇಲೆ ಕೇಸ್:8ಮಂದಿ ಬಂಧನ ಕಲ್ಲು ತೂರಾಟ ಕೇಸ್; ದುಷ್ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಘಟನೆ ಪುಂಡರಿಗೆ ತಕ್ಕ ಶಿಕ್ಷೆ ಇಂದ ಸಿದ್ದರಾಮಯ್ಯ.
ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು    ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ-  ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ( ರಿ.,) ಬೆಂಗಳೂರು ವಿಧಾನಸೌಧ ಮಾಧ್ಯಮದವರಿಗೆ ಪ್ರವೇಶ ನಿಬಂಧ- ರಾಜ್ಯ ಸಂಘ ಖಂಡನೆ ಮಾಧ್ಯಮದವರ ಮೇಲೆ ವಿಧಾನಸೌಧ ಪ್ರವೇಶಿಸಲು ನಿಷೇಧ ಹೇರುತ್ತಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಬ್ಬಾಳಿಕೆ.
ಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯಸಾರಿಗೆ ನೌಕರರ ಮುಷ್ಕರ. ಕರ್ನಾಟಕ ಸಾರಿಗೆ ನೌಕರರು ತಮ್ಮ 38 ತಿಂಗಳ ಹಿಂಬಾಕಿಯನ್ನು ಮತ್ತು 2024 ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಆದರೆ, ಬೆಂಗಳೂರು ಚಲೋಗೆ ರಾಜ್ಯದ ನಾನಾ ಭಾಗಗಳಿಂದ ಸಾರಿಗೆ ನೌಕರರು ಆಗಮಿಸಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜಮಾಯ
ಸಿದ್ದರಾಮಯ್ಯ  ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ  ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿಯಾಗಿದ್ದಾರೆ ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌. ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ