ಕುಂದಾಪುರ, ಮೇ 23: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಿಲ್ಲಾ ಪಂಚಾಯತ್ ಉಡುಪಿ ತಾಲೂಕು ಪಂಚಾಯತ್ ಕುಂದಾಪುರ ಗ್ರಾಮ ಪಂಚಾಯತ್ ಕೋಟೇಶ್ವರ ಇವರ ನೇತೃತ್ವದಲ್ಲಿ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಸುಮಾರು 25 ವರ್ಷಗಳ ಹಿಂದಿನ ಹಿಂದೂ ರುದ್ರಭೂಮಿಯನ್ನು ಈಗಿನ ಆಧುನಿಕ ಮಾದರಿಯಲ್ಲಿ ನಿರ್ಮಿಸಲಾಗಿದ್ದು. ಸುಮಾರು ಒಂದು ಕೋಟಿ ರೂ. ಅಂದಾಜು ವೆಚ್ಚದ ಈ ವಿದ್ಯುತ್ ಚಿತಾಗಾರದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿ* ಇದರ ಪ್ರಚಾರವನ್ನು ಮತ್ತಷ್ಟು ಗ್ರಾಮೀಣ ಮಟ್ಟದಲ್ಲಿ ವಿಸ್ತರಿಸಬೇಕು ಪಕ್ಷಾತೀತವಾಗಿ ಶೀಘ್ರದಲ್ಲಿ ಸಭೆ ಕರೆದು ಇದರ ಸದುಪಯೋಗದ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.
ಹಾಗೇ ಸಂದರ್ಭದಲ್ಲಿ ಕೋಟೇಶ್ವರ ಹಿಂದೂ ರುದ್ರಭೂಮಿ ಸೇವಾ ಸಮಿತಿ ಹಾಗೂ ಅಂದಿನ ವಿಧಾನ ಪರಿಷತ್ ಸದಸ್ಯರು, ಸಭಾಪತಿ ಆಗಿದ್ದ ಕೆ.ಪ್ರತಾಪಚಂದ್ರ ಶೆಟ್ಟಿಯವರ ಹಾಗೂ ಸ್ಥಳೀಯ ಗ್ರಾಪಂ ಮುತುವರ್ಜಿಯ ಹೋರಾಟಕ್ಕೆ ಶಾಸಕರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ
ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ್ ಭಂಡಾರಿ*, ಕೋಟೇಶ್ವರ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ರಾಗಿಣಿ ದೇವಾಡಿಗ , ಹಿಂದೂ ರುದ್ರ ಭೂಮಿಯ ಸ್ಥಾಪಕಾ ಅಧ್ಯಕ್ಷ ಶಂಕರ್ ಕಾಮತ್*,,ಕೋಟೇಶ್ವರ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು , ಬೀಜಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಪ್ರಕಾಶ್ ಜಿ. ಪೂಜಾರಿ , ಗೋಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ. *ಸುರೇಶ ಶೆಟ್ಟಿ ಕುಂದಾಪುರ ನಗರ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರೋಸ್ತ ಹಾಗೂ ಕೋಟೇಶ್ವರ ಗ್ರಾಮ ಪಂಚಾಯತಿನ ಸದಸ್ಯರು, ವಿವಿಧ ರಾಜಕೀಯ ಪಕ್ಷದ ಮುಖಂಡರು ಗ್ರಾಮಸ್ಥರು ಸಾರ್ವಜನಿಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸರ್ವರನ್ನು ಕೋಟೇಶ್ವರ ಗ್ರಾಮ ಪಂಚಾಯತಿನ ಪಿಡಿಒ ದಿನೇಶ್ ನಾಯ್ಕ್ ಸ್ವಾಗತಿಸಿದರು.ಚಂದ್ರಶೇಖರ್ ಬೀಜಾಡಿ ಇವರು ಕಾರ್ಯಕ್ರಮವನ್ನ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಅನೇಕ ಅನೇಕ ಸಮಾಜ ಸೇವಕರನ್ನು ಗುರುತಿಸಿ ಗೌರವಿಸಲಾಯಿತು.








